ವಿಜಯಸಿರಿನ್ಯೂಸ್/ಹರಪನಹಳ್ಳಿ
ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿಯ (ಬೆಸ್ಕಾಂ) ಕೇಂದ್ರ ಕಚೇರಿಯ ನಿರ್ದೇಶನದಂತೆ, ಕಂಪೆನಿಯ ತೆಲಗಿ ಉಪ ವಿಭಾಗ ವ್ಯಾಪ್ತಿಯ ಬಳಕೆದಾರ ಗ್ರಾಹಕರ ಸಭೆಯನ್ನ ಡಿ. 20ರಂದು ಶನಿವಾರ ಮಧ್ಯಾಹ್ನ 3.00ಕ್ಕೆ ಆಯೋಜಿಸಲಾಗಿದೆ.
ತಾಲೂಕಿನ ತೆಲಗಿ ಗ್ರಾಮದಲ್ಲಿರುವ ಬೆಸ್ಕಾಂ ಉಪ ವಿಭಾಗೀಯ ಕಚೇರಿಯಲ್ಲಿ ಏರ್ಪಡಿಸಿರುವ ಗ್ರಾಹಕರ ಸಭೆಗೆ ಉಪವಿಭಾಗ ವ್ಯಾಪ್ತಿಯ ಎಲ್ಲಾ ಗ್ರಾಹಕರು ಹಾಜರಾಗುವ ಮೂಲಕ ಇಲಾಖೆಗೆ ಸಂಬಂಧಿಸಿದ ಕುಂದು-ಕೊರತೆಗಳನ್ನು ಸಭೆಯಲ್ಲಿ ಚರ್ಚಿಸುವ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಬೆಸ್ಕಾಂ ತೆಲಗಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯ ಪ್ರಕಟಣೆ ಕೋರಿದೆ.

