Vijayasiri News
ಹರಪನಹಳ್ಳಿ ಸುದ್ದಿ

ಹರಪನಹಳ್ಳಿಯಲ್ಲಿ ಬಿಜೆಪಿಯ ಹರ್ ಘರ್ ತಿರಂಗಾ ಅಭಿಯಾನ

ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿ

ದೇಶದ 79ನೇ ಸ್ವಾತಂತ್ರ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ ಮಂಡಲದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗುರುವಾರ ಹಮ್ಮಿಕೊಂಡಿದ್ದ ‘ಹರ್ ಘರ್ ತಿರಂಗಾ ಅಭಿಯಾನದ ಬೈಕ್ ರ‍್ಯಾಲಿ’ ಜನಾಕರ್ಷಣೆಯಾಗಿ ನಗರದಲ್ಲಿ ಯಶಸ್ವಿಯಾಗಿ ನಡೆಯಿತು.

ಗುರುವಾರ ಬೆಳಿಗ್ಗೆ ನಗರದ ಹಿರೆಕೆರೆ ವೃತ್ತದಲ್ಲಿ ಸಮಾಗೊಂಡ ಕಾರ್ಯಕರ್ತರು ಅಭಿಯಾನಕ್ಕೆ ಸಜ್ಜಾದರು. ಮಂಡಲ ಅಧ್ಯಕ್ಷ ಯಡಿಹಳ್ಳಿ ಶೇಖರಪ್ಪ ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ಕೈಯಲ್ಲಿ ದೇಶದ ಹೆಮ್ಮೆಯ ರಾಷ್ಟçಧ್ವಜವನ್ನು ಹಿಡಿದು, ದೇಶಾಭಿಮಾನದ ಸಂದೇಶ ಸಾರುವ ಘೋಷಣೆಗಳನ್ನು ಮೊಳಗಿಸುವ ಮೂಲಕ  ನಗರದಲ್ಲಿ ಹಾದು ಹೋಗಿರುವ ಮರಿಯಮ್ಮನಹಳ್ಳಿ- ಶಿವಮೊಗ್ಗ ರಾಜ್ಯಹೆದ್ದಾರಿ ಮಾರ್ಗವಾಗಿ ಸಂಚರಿಸಿ, ಪ್ರವಾಸಿಮಂದಿರ ವೃತ್ತಕ್ಕೆ ಸಮಾವೇಶಗೊಂಡರು.

ದೇಶದ ಸ್ವಾತಂತ್ರ ಸಂಗ್ರಾಮದ ಐತಿಹಾಸಿಕ ಸ್ಮರಣೆಯ ಹಿನ್ನೆಲೆಯಲ್ಲಿ ಜನಜಾಗೃತಿಗಾಗಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪ್ರತಿ ಮನೆಯ ಮೇಲೆ ರಾಷ್ಟçದ ಹೆಮ್ಮೆಯ ರಾಷ್ಟçಧ್ವಜ ಹಾರಿಸುವಂತೆ ಪ್ರೇರೇಪಿಸುವ ಹಾಗೂ ರಾಷ್ಟçಪ್ರೇಮ, ದೇಶಭಕ್ತಿಯ ಸಂದೇಶ ಸಾರುವ ಉದ್ದೇಶವನ್ನು ಅಭಿಯಾನ ಹೊಂದಿದೆ. ಜತೆಗೆ, ಸ್ವಾತಂತ್ರö್ಯ ದಿನಾಚರಣೆಯಲ್ಲಿ ದೇಶದ ಪ್ರತಿ ಪ್ರಜೆಯೂ ಸಹಭಾಗಿತ್ವ ಪಡೆಯುವ ಮೂಲಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಜತೆಗೆ, ಯುವಜನ ಸಮುದಾಯದಲ್ಲಿ ಸ್ವಾತಂತ್ರö್ಯ ಸಂಗ್ರಾಮದ ಐತಿಹಾಸಿಕ ಘಟನೆಗಳನ್ನು ಸ್ಮರಣೀಯವಾಗಿಸಬೇಕು ಎಂಬ ಹಿನ್ನೆಲೆಯಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡರು ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ಯಡಿಹಳ್ಳಿ ಶೇಖರಪ್ಪ, ಮುಖಂಡರಾದ ಆರುಂಡಿ ನಾಗರಾಜ, ಲೋಕೇಶ್, ಶಿರಗಾನಹಳ್ಳಿ ವಿಶ್ವನಾಥ, ಕೆ. ಮಲ್ಲೇಶ್, ಕಣವಿಹಳ್ಳಿ ಮಾರುತಿ, ಸಿಂಗ್ರಿಹಳ್ಳಿ ನಾಗರಾಜ, ಪುರಸಭಾ ಸದಸ್ಯ ಗೌಳಿ ವಿನಯ್, ಜಾವೀದ್, ಭೀಮೇಶ್, ಮಹೇಶ್, ತಿಮ್ಮಪ್ಪ, ಬಸಣ್ಣ, ವಿಜಯಲಕ್ಷಿö್ಮÃ, ಯಂಕಮ್ಮ, ಜಾನಮ್ಮ ಸೇರಿದಂತೆ ನೂರಾರು ಕಾರ್ಯಕರ್ತರು ಹರ್ ಘರ್ ತಿರಂಗ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Related posts

ಹರಪನಹಳ್ಳಿ: ‘ಮನೆ- ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಚಾಲನೆ, ಅಪರಾಧಮುಕ್ತ ಸಮಾಜ ಕಟ್ಟುವಿಕೆಯಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ: ಎಸ್‌ಪಿ ಜಾಹ್ನವಿ

Vijayasiri News

ಅರಸೀಕೆರೆ: ಕಲುಷಿತ ಕುಡಿಯುವ ನೀರು ಪೂರೈಕೆ; ಪಂಚಾಯ್ತಿ ಕಚೇರಿ ಮುಂದೆ ಪ್ರತಿಭಟನೆ, ಸ್ವಂತ ವೆಚ್ಚದಲ್ಲಿ ಕೊಳವೆಬಾವಿ ಕೊರೆಯಿಸಿ ಕೊಡುವುದಾಗಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ. ಅಣ್ಣಪ್ಪ ಭರವಸೆ; ಪ್ರತಿಭಟನೆ ಸ್ಥಗಿತ

Vijayasiri News

|| ಯು. ಕಲ್ಲಹಳ್ಳಿ: ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿಗೆ || ಅಧ್ಯಕ್ಷರಾಗಿ ಚನ್ನಬಸಪ್ಪ- ಉಪಾಧ್ಯಕ್ಷರಾಗಿ ಲಿಂಗರಾಜ ಆಯ್ಕೆ

Vijayasiri News

ಅರಸೀಕೆರೆ ಗ್ರಾ.ಪಂ. ಅಧ್ಯಕ್ಷರ ಚುನಾವಣೆ: ಪಿ. ಕೆಂಚಮ್ಮ ಅವಿರೋಧ ಆಯ್ಕೆ

admin

ಹರಪನಹಳ್ಳಿ: ವಾಲ್ಮೀಕಿನಾಯಕ ಸಮಾಜದ ನೌಕರರ ಸಂಘದ ಆಶ್ರಯದಲ್ಲಿ ಪ್ರತಿಭಾಪುರಸ್ಕಾರ, ಸಾಂದಾರ್ಭಿಕ ಸನ್ನೀವೇಶದ ಪ್ರಭಾವಳಿಯಲ್ಲಿ ಮಾನವೀಯಮೌಲ್ಯಗಳ ಉಪೇಕ್ಷೆ ಸಲ್ಲದು: ಡಾ.ಪ್ರಸನ್ನಾನಂದ ಸ್ವಾಮೀಜಿ

Vijayasiri News

ಪಂಚಾಯ್ತಿ ಆಡಳಿತದ ಕಾರ್ಯವೈಖರಿ ವಿರುದ್ಧ ಸಾರ್ವಜನಿಕರ ಆಕ್ರೋಶ, ಕಲುಷಿತ ನೀರು ಪೂರೈಕೆ; ಸಾಂಕ್ರಾಮಿಕ ರೋಗದ ಆತಂಕದಲ್ಲಿ ಗ್ರಾಮಸ್ಥರು…!

Vijayasiri News
error: Content is protected !!