Vijayasiri News
ವಿಜಯನಗರಹೂವಿನಹಡಗಲಿ

ಹೂವಿನಹಡಗಲಿ: ಕುರಿಹಟ್ಟಿಯ ಮೇಲೆ ಬೀದಿ ನಾಯಿಗಳ ದಾಳಿ; 23 ಕುರಿಮರಿ ಸಾವು

ವಿಜಯಸಿರಿನ್ಯೂಸ್.ಕಾಂ/ ವಿಜಯನಗರ(ಹೊಸಪೇಟೆ)

ಕುರಿಹಟ್ಟಿಯ ಹಟ್ಟಿಯ ಮೇಲೆ ದಾಳಿ ನಡೆಸಿದ ಬೀದಿನಾಯಿಗಳ ಹಿಂಡು 23ಕುರಿಮರಿಗಳನ್ನು ಸಾಯಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಹೊಳಗುಂದಿ ಗ್ರಾಮದ ನಿಜಲಿಂಗಪ್ಪ ನಗರದ ಸಮೀಪದ ಭಾನುವಾರ ನಡೆದಿದೆ.
ಗ್ರಾಮದ ಕುರಿಗಾಹಿ ಹುಲುಗಪ್ಪ ಎಂಬುವವರಿಗೆ ಸೇರಿದ ಕುರಿಹಟ್ಟಿಯಲ್ಲಿ ಮರಿಗಳನ್ನು ಕೂಡಿಹಾಕಲಾಗಿತ್ತು. ಆದರೆ, ಬೀದಿನಾಯಿಗಳ ಹಿಂಡು ಹಟ್ಟಿಯ ಮೇಲೆ ದಾಳಿ ನಡೆಸುವ ಮೂಲಕ ಹಟ್ಟಿಯಲ್ಲಿದ್ದ ಮರಿಗಳನ್ನು ಕಚ್ಚಿಹಾಕಿವೆ. ಬೀದಿ ನಾಯಿಗಳ ದಾಳಿಯಿಂದಾಗಿ, ಹುಲುಗಪ್ಪ ಅವರಿಗೆ ಸೇರಿದ 20ಕುರಿಮರಿ, ಕಂದಗಲ್ ಶಿವರಾಜ ಅವರಿಗೆ ಸೇರಿದ 2ಮರಿ ಮತ್ತು ದೊಡ್ಡಬಸಪ್ಪ ಎಂಬುವವರಿಗೆ ಸೇರಿದ 1ಕುರಿಮರಿ ಸಾವನ್ನಪ್ಪಿವೆ.
ಮರಿಕುರಿಗಳನ್ನು ಹಟ್ಟಿಯಲ್ಲಿ ಕೂಡಿಹಾಕಿ, ಎಂದಿನಂತೆ ಕುರಿಗಳನ್ನು ಮೇಯಿಸಲು ಅಡವಿಗೆ ಹೋದ, ಸಂದರ್ಭದಲ್ಲಿ ನಾಯಿಗಳ ಹಿಂಡು ಹಟ್ಟಿಯ ಮೇಲೆ ದಾಳಿ ನಡೆಸಿವೆ. ನಾಯಿಗಳ ಹಿಂಡು ದಾಳಿ ನಡೆಸಿದ ಹಿನ್ನೆಯಲ್ಲಿ ಕುರಿಗಾಹಿಗಳ ಲಕ್ಷಾಂತರ ರೂಪಾಯಿ ನಷ್ಟಕ್ಕೆ ಸಿಲುಕಿದ್ದಾರೆ.
ಕುರಿ ಹಟ್ಟಿಯ ಮೇಲೆ ಬೀದಿ ನಾಯಿಗಳು ಆಗಾಗ್ಗೆ ದಾಳಿ ನಡೆಸುತ್ತಿರುವ ಪರಿಣಾಮ, ಕುರಿ ಹಾಗೂ ಮರಿಗಳು ಹಾನಿಗೆ ಒಳಗಾಗುತ್ತಿವೆ. ಹೀಗಾಗಿ, ಕುರಿಗಾಹಿಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ಸಂಬಂಧಿಸಿದ ಇಲಾಖೆಗಳು ಬೀದಿನಾಯಿಗಳ ಉಪಟಳಕ್ಕೆ ಕಡಿವಾಣ ಹಾಕುವ ಮೂಲಕ, ಸಂಕಷ್ಟಕ್ಕೆ ಸಿಲುಕಿದ ಕುರಿಗಾಹಿಗಳ ನೆರವಿಗೆ ಮುಂದಾಗಬೇಕು ಎಂಬುದು ಸಾರ್ವಜನಿಕರ ಆಗ್ರಹ.

Related posts

ಅರಸೀಕೆರೆ ಗ್ರಾ.ಪಂ. ಅಧ್ಯಕ್ಷರ ಚುನಾವಣೆ: ಪಿ. ಕೆಂಚಮ್ಮ ಅವಿರೋಧ ಆಯ್ಕೆ

admin

ಮಾನವೀಯಮೌಲ್ಯಗಳ ಮಾರ್ಗದರ್ಶಿ; ಪರಿಸರ ಚಾಕರಿಕೆ ಪ್ರವೃತ್ತಿಯ ಉಪನ್ಯಾಸಕ, ಹರಪನಹಳ್ಳಿ: ಉಪನ್ಯಾಸಕ ಶಿವಾನಂದ ಮುಡಿಗೇರಿದ ‘ರಾಜೀವ್‌ಗಾಂಧಿ ರಾಜ್ಯ ಶ್ರೇಷ್ಠ ಶಿಕ್ಷಕ ಪ್ರಶಸ್ತಿ’

Vijayasiri News

ಅರಸೀಕೆರೆ: ಕಲುಷಿತ ಕುಡಿಯುವ ನೀರು ಪೂರೈಕೆ; ಪಂಚಾಯ್ತಿ ಕಚೇರಿ ಮುಂದೆ ಪ್ರತಿಭಟನೆ, ಸ್ವಂತ ವೆಚ್ಚದಲ್ಲಿ ಕೊಳವೆಬಾವಿ ಕೊರೆಯಿಸಿ ಕೊಡುವುದಾಗಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ. ಅಣ್ಣಪ್ಪ ಭರವಸೆ; ಪ್ರತಿಭಟನೆ ಸ್ಥಗಿತ

Vijayasiri News

ಭಾವೈಕ್ಯತ ತಪೋಭೂಮಿ ಚೌಕಿಮಠದಲ್ಲಿ ಮಹಾ ಕಾರ್ತೀಕೋತ್ಸವ ಹಾಗೂ ದೀಪೋತ್ಸವ

Vijayasiri News

||ವಿಜಯನಗರ: ಸಿಪಿಐ ಪಕ್ಷದ 2ನೇ ಜಿಲ್ಲಾ ಸಮ್ಮೇಳನ|| ಮತೀಯವಾದ ಮತ್ತು ಭಾವನಾತ್ಮಕ ವಿಷಯಗಳೇ ಬಿಜೆಪಿ ಮೂಲಮಂತ್ರ: ಡಾ. ಸಿದ್ಧನಗೌಡ ಪಾಟೀಲ್

Vijayasiri News

ಹೂವಿನಹಡಗಲಿ: ನಾಡಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ, ಸಾರ್ವಜನಿಕರ ಅಹವಾಲು ಸ್ವೀಕಾರ: ನಿವೇಶನರಹಿತ ಕುಟುಂಬಗಳಿಗೆ ನಿವೇಶನ ಒದಗಿಸಲು ಕ್ರಮಕ್ಕೆ ಸೂಚನೆ

Vijayasiri News
error: Content is protected !!