Vijayasiri News
ನಮ್ಮೂರ ಸುದ್ದಿಹರಪನಹಳ್ಳಿ ಸುದ್ದಿ

ಎಸ್‌ಯುಜೆಎಂ ಕಾಲೇಜಿನಲ್ಲಿ ನಡೆದ ಅಭಿಯಾನ || ಹರಪನಹಳ್ಳಿ: ನಶಾಮುಕ್ತ ಭಾರತ ಅಭಿಯಾನದ ಪ್ರತಿಜ್ಞಾವಿಧಿ ಬೋಧನೆ ||

ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿ
ದೇಶದ ೭೯ನೇ ಸ್ವಾತಂತ್ರö್ಯ ದಿನಾಚರಣೆಯ ಅಂಗವಾಗಿ ವಿಜಯನಗರ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ಹಮ್ಮಿಕೊಂಡಿರುವ ನಶಮುಕ್ತ ಭಾರತ ಅಭಿಯಾನದ ಹಿನ್ನೆಲೆಯಲ್ಲಿ ಬುಧವಾರ ನಗರದ ಎಸ್‌ಯುಜೆಎಂ ಪದವಿಪೂರ್ವ ಕಾಲೇಜು ಆವರಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯ ಸಹವಾಸ ಹಾಗೂ ಅದರಿಂದಾಗುವ ದುಷ್ಪರಿಣಾಮ, ಅದರಿಂದ ಸಂಭವಿಸುವ ಸಾಮಾಜಿಕ ಅನಾಹುತಗಳ ಕುರಿತಂತೆ ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಲಾಯಿತು.


ಇದೇ ಸಂದರ್ಭದಲ್ಲಿ ನಶಮುಕ್ತ ಭಾರತವನ್ನು ಕಟ್ಟುವ ಹಿನ್ನೆಲೆಯಲ್ಲಿ ಯುವಸಮುದಾಯದ ಭಾಗವಾದ ನಾವು ಮಾದಕವಸ್ತುಗಳ ಸೇವನೆಯಿಂದ ದೂರ ಇರುತ್ತೇವೆ ಎಂದು ನಶಮುಕ್ತ ಭಾರತ ಅಭಿಯಾನದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಇದನ್ನೂ ಓದಿ: ಕಲ್ಲೆದೇವರ ಗ್ರಾಮದಲ್ಲಿ ಗ್ರಂಥಾಲಯ ಪಿತಾಮಹ ಡಾ. ರಂಗನಾಥನ್ ಜಯಂತ್ಯುತ್ಸವ

ವಿಜಯನಗರ ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ತಿಮ್ಮಪ್ಪ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ವೈ.ಎಚ್. ಚಂದ್ರಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೇಪಾಕ್ಷಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಜಿ.ಟಿ. ಅಶೋಕ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಪೃಥ್ವಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಕೃಷ್ಣಮೂರ್ತಿ, ಉಪನ್ಯಾಸಕರಾದ ಎಚ್. ಮಲ್ಲಿಕಾರ್ಜುನ, ಶಿವಕುಮಾರ, ಪ್ರವೀಣ್, ಎಂಆರ್‌ಡಬ್ಲೂö್ಯ ಆರ್. ಧನರಾಜ್ ಕೆ. ಜುಂಜಪ್ಪ ಇತರರು ಹಾಜರಿದ್ದರು.

Related posts

ಹರಪನಹಳ್ಳಿ: ನಾಳೆ ಬೆಸ್ಕಾಂ ಗ್ರಾಹಕರ ಸಂವಾದ ಸಭೆ

Vijayasiri News

ಹರಪನಹಳ್ಳಿ: ನಗರದ ಎಚ್‌ಪಿಎಸ್ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ, ಭವಿಷ್ಯದ ಬದುಕಿನ ಮಾರ್ಗದರ್ಶಕರಾದ ಪೋಷಕರು- ಗುರುಗಳು ನಮಗೆ ಆದರ್ಶರಾಗಬೇಕಿದೆ: ಡಾ. ಶಿವಕುಮಾರ್

Vijayasiri News

ಅರಸೀಕೆರೆ: ಕಲುಷಿತ ಕುಡಿಯುವ ನೀರು ಪೂರೈಕೆ; ಪಂಚಾಯ್ತಿ ಕಚೇರಿ ಮುಂದೆ ಪ್ರತಿಭಟನೆ, ಸ್ವಂತ ವೆಚ್ಚದಲ್ಲಿ ಕೊಳವೆಬಾವಿ ಕೊರೆಯಿಸಿ ಕೊಡುವುದಾಗಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ. ಅಣ್ಣಪ್ಪ ಭರವಸೆ; ಪ್ರತಿಭಟನೆ ಸ್ಥಗಿತ

Vijayasiri News

|| ಹರಪನಹಳ್ಳಿ: ಸಿಪಿಐ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ || ಉಚ್ಚಂಗಿದುರ್ಗದ ಆಶ್ರಯ ಪ್ಲಾಟ್ ನಿವಾಸಿಗಳಿಗೆ ಖಾಸಗೀ ವ್ಯಕ್ತಿಯ ಕಿರುಕುಳ ಆರೋಪ

Vijayasiri News

ಭಾವೈಕ್ಯತ ತಪೋಭೂಮಿ ಚೌಕಿಮಠದಲ್ಲಿ ಮಹಾ ಕಾರ್ತೀಕೋತ್ಸವ ಹಾಗೂ ದೀಪೋತ್ಸವ

Vijayasiri News

ಜೋಕುಮಾರಮೂರ್ತಿಯ ಮೇಲೆ ಹುಲಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಆರಾಧನೆ ಸ್ಥಗಿತ; ಅಂದಿನಿಂದಲೇ ಊರ ಹೆಸರು ನಾಮಾಂಕಿತ, ಹುಲಿಕಟ್ಟೆ: ಈ ಊರಲ್ಲಿ ಜೋಕುಮಾರಸ್ವಾಮಿ ಆರಾಧನೆ ನಿಷಿದ್ಧ!

Vijayasiri News
error: Content is protected !!