ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿ
ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿಯ (ಬೆಸ್ಕಾಂ) ಕೇಂದ್ರ ಕಚೇರಿಯ ನಿರ್ದೇಶನದಂತೆ, ಕಂಪೆನಿಯ ಬಳಕೆದಾರ ಗ್ರಾಹಕರ ಸಭೆಯನ್ನ ಡಿ. 20ರಂದು ಶನಿವಾರ ಮಧ್ಯಾಹ್ನ 3.30ಕ್ಕೆ ಆಯೋಜಿಸಲಾಗಿದೆ.
ನಗರದ ಬೆಸ್ಕಾಂ ಉಪ ವಿಭಾಗೀಯ ಕಚೇರಿಯಲ್ಲಿ ಏರ್ಪಡಿಸಿರುವ ಗ್ರಾಹಕರ ಸಭೆಗೆ ಉಪವಿಭಾಗ ವ್ಯಾಪ್ತಿಯ ಎಲ್ಲಾ ಗ್ರಾಹಕರು ಹಾಜರಾಗುವ ಮೂಲಕ ಇಲಾಖೆಗೆ ಸಂಬಂಧಿಸಿದ ಕುಂದು-ಕೊರತೆಗಳನ್ನು ಸಭೆಯಲ್ಲಿ ಚರ್ಚಿಸುವ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಹರಪನಹಳ್ಳಿ ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಾಶ್ ಪತ್ತೆನೂರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

